ಒಟ್ಟು ನೋಟಗಳು

Wednesday, July 24, 2024

ನನ್ನೊಳಗಿಹ ನಿನ್ನ ಅರಿಯದೇ - ರಚನೆ: ಶ್ರೀ. ಆನಂದ ರಾಮ್, ಶೃಂಗೇರಿ

 ನನ್ನೊಳಗಿಹ ನಿನ್ನ ಅರಿಯದೇ ಮರುಳನಂತೆ ಇನ್ನೆಲ್ಲೋ ಹುಡುಕುತಿಹೆನೋ ಗುರುವೇ

ಇರುವಿನರಿವು ಮೂಡಲು ಇನ್ನೆಷ್ಟು ಕಾಡಿ ಬೇಡಬೇಕೋ ತಿಳಿಯನು ನನ್ನ ದೊರೆಯೇ.

ನಿನ್ನಿರುವ ಮರೆತು ಮನ ತೋರಿದೊಡೆ ಓಡುವ ಬದುಕಿಗೆ ಅರ್ಥವಿದೆಯಾ ಗುರುವೇ
ತೋರುವರ್ಯಾರೋ ಸರಿ ದಾರಿಯ ಮಂಕನಂತೆ ತಿರುಗಿ ಬಸವಳಿದೆ ಪ್ರಭುವೇ.

ಯೋಗ್ಯನಲ್ಲ ನಾನು ನಿನ್ನ ಪ್ರೀತಿ ಗಳಿಸಲು ಸೋತು ಸುಣ್ಣವಾಗಿ ಅಸಹಾಯಾಕನಾದೆನೋ 
ಬೇಡಲು ಮನ ಒಪ್ಪದು ಮಾಡಿದಾ ಕರ್ಮವದು ಬಲು ಕಾಡುತಿಹದೋ ದೊರೆಯೇ.

ನಿನ್ನೆದುರು ನಿಂತು ಬೇಡಲಾರದೆ ಅನ್ಯರಿಗೆ ಶರಣಾಗಿ ಅಂಗಲಾಚಿದೆ ನಿನ್ನ ಕರುಣೆಗಾಗಿ
ಕಾರುಣ್ಯಸಿಂದು ಎಂದು ಬಿರುದು ಹೊತ್ತವ ನೀನು ಪಾಮರನ ಕೂಗು ಆಲಿಸದಾದೆಯಾ.

ಸಹಜ ಬದುಕು ಬಳಲಾರದೆ ಬಣ್ಣ ಬಳಿದು ವೇಷ ಧರಿಸಿ ನಿಂತರೆ ಅರಿಯಲಾರೆಯಾ
ಎಲ್ಲದಕೂ ಕ್ಷಮೆ ಇರಲಿ ಮುನಿಸು ತೋರಬೇಡ ನನ್ನ
ಸಖರಾಯಪುರದ ಮಹಾದೇವನೇ.

No comments:

Post a Comment